ಮಂಜೇಶ್ವರ: ಕುಂಜತ್ತೂರಿನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಸಾವಿನ ಸಂಖ್ಯೆ 2 ಕ್ಕೇರಿದೆ. ಗಂಭೀರ ಗಾಯಗೊಂಡ ಶೇಕುಞ ಎಂಬವರು ಮಂಗಳೂರು ಆಸ್ಪತ್ರೆಯಲ್ಲಿ ಇಂದು (ಮಂಗಳವಾರ) ಬೆಳಗ್ಗೆ ಕೊನೆಯುಸಿರೆಳೆದರು. ಇವರ ಕಾಲಿಗೆ ಇರಿತದಿಂದ ಗಂಭೀರ ಗಾಯವಾಗಿತ್ತು. ಈ ಪ್ರಕರಣದಲ್ಲಿ ಜುಮೈಲ ಎಂಬಾಕೆ ನಿನ್ನೆ ರಾತ್ರಿ ಮೃತಪಟ್ಟಿದ್ದಳು. ಈ ಘಟನೆಗೆ ಸಂಬಂಧಿಸಿದಂತೆ ಜುಮೈಲಳ ತಂದೆ ಉಮ್ಮರ್ ನನ್ನು ಪೊಲೀಸರು ಬಂಧಿಸಿದ್ದಾರೆ.