ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆ; ನಿಧನರಾದ ಸಕ್ರಿಯ ಸದಸ್ಯರ ಕುಟುಂಬಕ್ಕೆ ಧನಸಹಾಯ ಹಸ್ತಾಂತರ


 ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿ, ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯರಾಗಿದ್ದ ಸುಬ್ಬಣ್ಣ ಆಳ್ವ ಅವರು ಆಕಸ್ಮಿಕವಾಗಿ ನಿಧನರಾಗಿರುವ ಹಿನ್ನೆಲೆಯಲ್ಲಿ, ಅವರ ಧರ್ಮಪತ್ನಿ ಶ್ರೀಮತಿ ವಸಂತಿ ಆಳ್ವ ಅವರಿಗೆ ರೂ. 50,000/- ಸಹಾಯಧನದ ಚೆಕ್ ಅನ್ನು ಸಂಸ್ಥೆಯ ಉಪಾಧ್ಯಕ್ಷರಾದ  ಪದ್ಮರಾಜ ಪಟ್ಟಾಜೆ ಅವರು ಮೃತರ ಪುತ್ರ  ಮನೋಜ್ ಆಳ್ವ ಅವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಬದಿಯಡ್ಕ ಪ್ರಾಂತೀಯ ವ್ಯವಸ್ಥಾಪಕರಾದ ಚಂದ್ರ ಎಂ ಹಾಗೂ ಬದಿಯಡ್ಕ ಶಾಖೆಯ ವ್ಯವಸ್ಥಾಪಕರಾದ ಶ್ಯಾಂ ಪ್ರಶಾಂತ ಬಿ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು