ತಿರುವನಂತಪುರಂ: ರಾಜ್ಯದಲ್ಲಿ ಮುಂಗಾರು ಮಳೆ ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಾಳೆ (ಶನಿವಾರ) ಕಾಸರಗೋಡು ಸಹಿತ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ಕೋಜಿಕ್ಕೋಡು, ವಯನಾಡು, ಮಲಪ್ಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಜತೆಗೆ 50 ಕಿ.ಮೀ ವೇಗದಲ್ಲಿ ಗಾಳಿಯೂ ಬೀಸಲಿದೆ. ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
Tags
ತಿರುವನಂತಪುರಂ

