ಅಡೂರಿನಲ್ಲಿ‌ ಮಣ್ಣು ಜರಿದು ಬಿದ್ದು ಆಟವಾಡುತ್ತಿದ್ದ ಇಬ್ಬರು ಮಕ್ಕಳು‌ ಮೃತ್ಯು; ಓರ್ವನ ಸ್ಥಿತಿ ಚಿಂತಾಜನಕ


ಮುಳ್ಳೇರಿಯ: ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಡೂರು ಸಂಜಕಡವಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ (ಮಣ್ಣು ಕುಸಿತ) ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ‌ನಡೆದಿದೆ. ಇನ್ನೋರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ (ಇಂದು) ಸಂಜೆ ಈ ಘಟನೆ ಸಂಭವಿಸಿದೆ. ಅಬೂಬಕ್ಕರ್ ಎಂಬುವವರ ಮಕ್ಕಳಾದ ಮುನ್ಸೀರ್ (10) ಮತ್ತು ಮುಜಮ್ಮಿಲ್ (14) ಮೃತಪಟ್ಟವರು.

ಇತ್ತೀಚೆಗಷ್ಟೇ ಗೃಹಪ್ರವೇಶ ನಡೆದಿದ್ದ ಮನೆಯ ಸಮೀಪ ಮೂರೂ ಮಕ್ಕಳು ಆಟವಾಡುತ್ತಿದ್ದಾಗ ಮಣ್ಣಿನ ದಿಣ್ಣೆ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.



ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಆದೂರು ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು