ಮಲಪ್ಪುರಂ ವಂಡೂರಿನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಇರಿತ


 ಮಲಪ್ಪುರಂ:  ವಂಡೂರ್ ಕಾಪ್ಪಿಲ್‌ನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ಕತ್ತಿನಿಂದ ಕಡಿದು ಹಲ್ಲೆ ನಡೆಸಲಾಗಿದೆ. ಕಾಪ್ಪಿಲ್ ನಿವಾಸಿಗಳಾದ ವಿಶಾಖ್ ಮತ್ತು ಜಿತಿನ್ ಎಂಬವರ ಮೇಲೆ ದಾಳಿ ನಡೆದಿದೆ. ಇಬ್ಬರ ಕೈಗಳಿಗೂ ಗಂಭೀರ ಗಾಯಗಳಾಗಿವೆ. ಭಾನುವಾರ ರಾತ್ರಿ 9 ಗಂಟೆಯ ಸುಮಾರಿಗೆ ಕಾಪ್ಪಿಲ್ ಟೌನ್‌ನಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳಿಬ್ಬರನ್ನು ಪೆರಿಂತಲ್ಮಣ್ಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದಾಳಿಯ ಹಿಂದೆ ಸಿಪಿಐ(ಎಂ) ಕಾರ್ಯಕರ್ತರಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ವಾರ್ಡ್ ಸದಸ್ಯರ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎಂದು ಬಿಜೆಪಿ ದೂರಿದೆ. ವಂಡೂರ್ ಪಂಚಾಯತ್‌ನ 24ನೇ ವಾರ್ಡ್ ಸದಸ್ಯ ಸಲಾಮ್ ಮತ್ತು ಸಿಪಿಐ(ಎಂ) ಕಾರ್ಯಕರ್ತ ಜಿತು ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು