ಕಾಡುಕೋಣದ ದಾಳಿಯಿಂದ ವೃದ್ಧರೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ . ಕೊಲ್ಲಂ ಕುಳತ್ತುಪುಯ ಬೀಮಾ ಮಂಜಿಲ್ನ ಬಶೀರ್ (68) ಮೃತಪಟ್ಟವರು. ಇಂದು (ಗುರುವಾರ) ಮುಂಜಾನೆ ಈ ದುರ್ಘಟನೆ ನಡೆದಿದೆ.
ಬಶೀರ್ ಅವರು ಕುಳತ್ತುಪುಳ ಜಂಕ್ಷನ್ಗೆ ನಡೆದುಕೊಂಡು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಅವರು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಜನವಸತಿ ಪ್ರದೇಶಕ್ಕೆ ನುಗ್ಗಿದ ಕಾಡುಕೋಣ ವ್ಯಕ್ತಿಯೊಬ್ಬರ ಜೀವ ತೆಗೆದಿರುವುದರಿಂದ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿದೆ.
Tags
ತಿರುವನಂತಪುರಂ
